Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಹಾಗೂ ನೂತನ ವೆಬ್ ಸೈಟ್ ಉದ್ಘಾಟನೆ

ಉಜಿರೆ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀ ಧರ್ಮಸ್ಥಳ ಮಂಜುನಾಥ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ನ ನೂತನ ಘಟಕ ಉದ್ಘಾಟನೆ ಜನವರಿ 23ರಂದು ಜರಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯೂ, ಎಸ್ಡಿಎಂ ಮೆಡಿಕಲ್ ಟ್ರಸ್ಟ್ ನ ಅಧ್ಯಕ್ಷರೂ ಆಗಿರುವ ಡಾ.ಡಿ ವೀರೇಂದ್ರ ಹೆಗ್ಗಡೆ ಯವರು ಅಧ್ಯಕ್ಷತೆಯಲ್ಲಿ ಡಯಾಲಿಸಿಸ್ ಘಟಕವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶ್ರೀ ವಿ ಸುನಿಲ್ ಕುಮಾರ್ ನೂತನ ಘಟಕವನ್ನು ಉದ್ಘಾಟಿಸಿದರು.

ಆಸ್ಪತ್ರೆಯ ನೂತನ ವೆಬ್ ವೆಬ್ ಸೈಟ್‍ನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಶ್ರೀ ಎಸ್. ಅಂಗಾರ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್ , ಉಜಿರೆ ಗ್ರಾಮ ಪಂಚಾಯತ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ, ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ಕಿಶೋರ್ ಕುಮಾರ್, ತಾ.ಆರೋಗ್ಯಾಧಿಕಾರಿ ಡಾ.ಕಲಾಮಧು ಶೆಟ್ಟಿ, ಮಂಗಳೂರಿನ ಖ್ಯಾತ ಮೂತ್ರಪಿಂಡ ತಜ್ಞ ಡಾಕ್ಟರ್ ಸಂತೋಷ್ ಪೈ ಭಾಗವಹಿಸಿದರು.

ಎಸ್.ಡಿ.ಎಂ ಆಸ್ಪತ್ರೆಯ ಟ್ರಸ್ಟಿ ಡಿ. ಹರ್ಷೇಂದ್ರ ಕುಮಾರ್, ನಿರ್ದೇಶಕರಾದ ಎಂ ಜನಾರ್ಧನ್ ವೈದ್ಯಕೀಯ ಅಧೀಕ್ಷಕ ಡಾII ರಂಜನ್ ಕುಮಾರ್, ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ಸಾತ್ವಿಕ್ ಜೈನ್, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಹೆಚ್ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

ಕುಮಾರಿ ಸಿಂಧೂರಾ ಪ್ರಾರ್ಥನೆ ಹಾಡಿದರು. ಎಸ್ಡಿಎಂ ಮೆಡಿಕಲ್ ಟ್ರಸ್ಟ್ ನ ಟ್ರಸ್ಟಿ ಡಿ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಹೇಮಾ ವಚ್ಚ ನಿರೂಪಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಂಗೀತ ಸಹಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.

News and Events

Related News