News and Events
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರದ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆಗೊಂಡಿತು. ಇದೇ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಶ್ರೀಯುತ ಹರೀಶ್ ಪೂಂಜಾ ಮತ್ತು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀಯುತ ಕೆ.ಎನ್ ಜನಾರ್ದನ್ ಉದ್ಘಾಟಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮಾರ್ಕೆಟಿಂಗ್ ಎಕ್ಷ್ಕ್ಯೂಟಿವ್ ಸುಮಂತ್ ರೈ ಉಪಸ್ಥಿತರಿದ್ದರು.



















